ಲೇಬಲ್ಗಳು
ವಿಜಯವಾಣಿ
(55)
ಪತ್ರಿಕೋದ್ಯಮ
(48)
Karnataka
(34)
ಕರ್ನಾಟಕ
(26)
Politics
(24)
ಕನ್ನಡ ಮತ್ತು ಸಂಸ್ಕೃತಿ
(23)
National
(22)
ಸಂದರ್ಶನ
(17)
ವಿವಾದ
(11)
ಜೀವನ
(10)
Commerce
(8)
Justice
(7)
ಆರೆಸ್ಸೆಸ್
(7)
Congress
(6)
ಭಗವದ್ಗೀತೆ
(6)
ಭ್ರಷ್ಟಾಚಾರ
(6)
Book
(5)
External Affairs
(5)
Vijay Karnataka
(5)
ರಾಜಕೀಯ
(5)
Army
(4)
Budget
(4)
Religion
(4)
ಟೌನ್ ಹಾಲ್
(4)
ಶಿಕ್ಷಣ
(4)
Kashmir
(3)
SL Bhyrappa
(3)
Vijayavani
(3)
ಸಾಹಿತ್ಯ
(3)
Freedom
(2)
Modi
(2)
Yedyurappa
(2)
ಇಸ್ರೊ
(2)
ಉದ್ಯೋಗ
(2)
ಪರಿಸರ ಮಾಲಿನ್ಯ
(2)
ಬಾಹ್ಯಾಕಾಶ
(2)
ವಂಚನೆ
(2)
ವಿಜ್ಞಾನ
(2)
Arundhati Roy
(1)
Bhagat singh
(1)
Bharat
(1)
Fashion
(1)
Internet
(1)
Interview
(1)
Mohan Bhagwat
(1)
Muslim
(1)
Opinion
(1)
Poem
(1)
RSS
(1)
Real Estate
(1)
Sikh
(1)
Sports
(1)
ಕನ್ನಡ ಪ್ರಭ
(1)
ಚೀನಾ
(1)
ಹೊಸ ದಿಗಂತ
(1)
ಗುರುವಾರ, ಅಕ್ಟೋಬರ್ 18, 2012
ಶುಕ್ರವಾರ, ಏಪ್ರಿಲ್ 06, 2012
6-4-2012ರ ಶುಕ್ರವಾರ, ಕನ್ನಡ ಪ್ರಭ ದಲ್ಲಿ ಪ್ರಕಟವಾದ ನನ್ನ ಲೇಖನ
ಕಾಲಗತಿ ತಡೆಯಲು ಹೋಗಿ ಗತಕಾಲ ಸೇರಿಬಿಟ್ಟರೆ?
ಕರ್ನಾಟಕದ ಜನಸಂಖ್ಯೆಯನ್ನು ಅದಷ್ಟೋ ವರ್ಷ ಮುಕ್ಕೋಟಿ-ಮುಕ್ಕೋಟಿ ಎನ್ನುತ್ತಲೇ ಇದ್ದರು. ಆದರೆ ಅದ್ಯಾವಾಗ ಚತುಷ್ಕೋಟಿ, ಪಂಚಕೋಟಿಯಾಗಿ, ಆರುಕೋಟಿಗೆ ಬಂದಿತೋ ಎಂಬುದು ತಿಳಿಯಲೇ ಇಲ್ಲ. ಇತಿಹಾಸ ಬರೆಯುವುದು ಈಗ ಅಷ್ಟೇನೂ ಸುಲಭದ ಕೆಲಸವಲ್ಲ. 1095ರಿಂದ 1272ರ ವರೆಗಿನ 179ವರ್ಷಗಳಲ್ಲಿ ಕ್ರಿಶ್ಚಿಯನ್ನರು ಮುಸ್ಲಿಮರ ವಿರುದ್ಧ 9ಬಾರಿ ಕ್ರೂಸೆಡ್ ನಡೆಸಿದರು ಎಂದು ಹೈಸ್ಕೂಲ್ ಪಾಠಗಳಲ್ಲಿ ಹೇಳಿದಷ್ಟು ಸಲೀಸಾಗಿ, ಕೇವಲ 239 ದಿನಗಳ ಸದಾನಂದಗೌಡರ ಆಡಳಿತವನ್ನು ವರ್ಣಿಸಲು ನಮಗೆ ಸಾಧ್ಯವಿಲ್ಲ. ದಿನಕ್ಕೆ ನೂರಾರು ಬೆಳವಣಿಗೆಗಳು, ಕನ್ನಡದ ನಾಲ್ಕೈದು-ಹಿಂದಿ ಇಂಗ್ಲಿಷ್ನ ಏಳೆಂಟು ನ್ಯೂಸ್ಚಾನೆಲ್ಗಳು, ಊರುತುಂಬಾ ಅಂತರ್ಜಾಲ, ತಲೆತುಂಬಾ ಮಾಹಿತಿಯ ಮಹಾಪೂರ. ಸೋಜಿಗವೆಂದರೆ ಇಷ್ಟೆಲ್ಲಾ ಇದ್ದೂ ಸಹ ವೋಟಿಗಾಗಿ ನೊಟು ಪ್ರಕರಣದಲ್ಲಿ ಬಿ.ಜೆ.ಪಿ ಸಂಸದರನ್ನು ಜೈಲಿಗಟ್ಟಿದ್ದು ಸರಿಯೋ ತಪ್ಪೋ ಎಂದು ಎದುರಾಳಿಗಳಿಗೂ ಮನವರಿಕೆಯಾಗುವಂತೆ-ಗಂಟೆಗಟ್ಟಲೆ ಚರ್ಚೆಯ ನಂತರವೂ-ಮಾಡಲು ಘಟಾನುಘಟಿ ವಕೀಲರಾದ ಅರುಣ್ ಜೈಟ್ಲಿ, ಅಭಿಷೇಕ್ ಸಿಂಘ್ವಿ, ಆನಂದ್ ಶರ್ಮ, ಕಪಿಲ್ ಸಿಬಲ್, ರವಿಶಂಕರ್ ಪ್ರಸಾದ್ ಅಂಥವರಿಗೇ ಸಾಧ್ಯವಾಗುತ್ತಿಲ್ಲ. ಟಿ.ವಿ ಚರ್ಚೆಯ ನಂತರ ಯಾವೊಬ್ಬನೂ ಸಹ ತನ್ನ ಮೊದಲಿದ್ದ ಮನೋಭಾವವನ್ನು ಬದಲಿಸಿಕೊಂಡು ತೆರಳಿದ ಒಂದೇ ಒಂದು ಉದಾಹರಣೆ ಇಲ್ಲ. ಹಾಗಿದ್ದಾಗ, ಮೊಘಲರ ಆಡಳಿತದಲ್ಲಿ ಜನಜೀವನ, ಕೃಷ್ಣದೇವರಾಯನ ಕಾಲದ ಆಡಳಿತ ಎಂದೆಲ್ಲಾ ಇದಮಿತ್ಥಂ ಎಂದು ಹೇಗೆ ಹೇಳಲು ಸಾಧ್ಯ? ತನ್ನ ಓದಿಗೆ ನಿಲುಕಿದ, ತನ್ನ ಜ್ಞಾಪಕದಲ್ಲಿ ಉಳಿದ, ತನ್ನ ಪೂರ್ವಾಗ್ರಹ ಮನಸ್ಸಿನಿಂದ ಒಬ್ಬ ತಜ್ಞ ಬರೆದ ಲೇಖನವನ್ನೇ ಇತಿಹಾಸ ಎನ್ನಬಹುದೇ ಹೊರತು ಇತಿ + ಹಾಸ ಎನ್ನುವಂತೆ ಹೀಗೇನಡೆದದ್ದು ಎನ್ನಲಾಗದು.
ಎರಡು ದಿನ ಟಿ.ವಿ, ಪೇಪರ್ ನೋಡದೇ ನಿಮ್ಮ ಸ್ನೇಹಿತರ ಅಡ್ಡಾಗೆ ಹೋಗಿ ಅವರ ಮಾತು ಕೇಳಿಸಿಕೊಳ್ಳಿ. ಏನೋ ಹೊಸ ವಿಚಾರಗಳು, ಒಂದಕ್ಕೂ ಲಿಂಕ್ ಸಿಗುತ್ತಾ ಇಲ್ಲ, ಯಾವುದೋ ಹೊಸ ಪ್ರಪಂಚಕ್ಕೆ ಬಂದಂತಹ ಅನುಭವ. ಎರಡೇ ದಿನದಲ್ಲಿ ನೀವು ಔಟ್ಡೇಟೆಡ್ ಆಗಿರುತ್ತೀರಿ. ಕಾಲದ ವೇಗಕ್ಕೆ ಸೆಡ್ಡು ಹೊಡೆದು ವರ್ಷಗಟ್ಟಲೆ ನಿಂತಲ್ಲೇ ನಿಂತಿರುವುದು ಟಿ.ವಿ ಧಾರಾವಾಹಿಗಳೆಂಬ ಗಟ್ಟಿಗಿತ್ತಿಯರೇ ಹೊರತು, ಸುದ್ದಿಗಳೆಂಬ ಮಿಣುಕು ಹುಳಗಳಲ್ಲ.
ಖಳನಟ ವಜ್ರಮುನಿ ಕೆನ್ನೆಯಂತಹ ರಸ್ತೆಗಳಲ್ಲಿ ಕುಟುಕುಟು ಶಬ್ದ ಮಾಡಿಕೊಂಡು, ಇವತ್ತೇ ಮನೆ ಸೇರುತ್ತೇನೋ ಇಲ್ಲವೋ ಎನ್ನುತ್ತಿದ್ದ ಲೂನಾದಂತೆ ಚಲಿಸುತ್ತಿದ್ದ ಕಾಲಚಕ್ರ ಇಂದು ಹೇಮಾಮಾಲಿನಿ ಕೆನ್ನೆಯಂತಹ ನ್ಯಾಷನಲ್ ಹೈವೇಗಳಲ್ಲಿ 200ಕಿ.ಮೀ ವೇಗದಲ್ಲಿ ಹಾರ್ಲೆ ಡೇವಿಡ್ಸನ್ನಂತೆ ಚಲಿಸುತ್ತಿದೆಯೇನೋ ಎನ್ನಿಸುತ್ತಿದೆ.
ಕರ್ನಾಟಕದ ಜನಸಂಖ್ಯೆಯನ್ನು ಅದಷ್ಟೋ ವರ್ಷ ಮುಕ್ಕೋಟಿ-ಮುಕ್ಕೋಟಿ ಎನ್ನುತ್ತಲೇ ಇದ್ದರು. ಆದರೆ ಅದ್ಯಾವಾಗ ಚತುಷ್ಕೋಟಿ, ಪಂಚಕೋಟಿಯಾಗಿ, ಆರುಕೋಟಿಗೆ ಬಂದಿತೋ ಎಂಬುದು ತಿಳಿಯಲೇ ಇಲ್ಲ. ಇತಿಹಾಸ ಬರೆಯುವುದು ಈಗ ಅಷ್ಟೇನೂ ಸುಲಭದ ಕೆಲಸವಲ್ಲ. 1095ರಿಂದ 1272ರ ವರೆಗಿನ 179ವರ್ಷಗಳಲ್ಲಿ ಕ್ರಿಶ್ಚಿಯನ್ನರು ಮುಸ್ಲಿಮರ ವಿರುದ್ಧ 9ಬಾರಿ ಕ್ರೂಸೆಡ್ ನಡೆಸಿದರು ಎಂದು ಹೈಸ್ಕೂಲ್ ಪಾಠಗಳಲ್ಲಿ ಹೇಳಿದಷ್ಟು ಸಲೀಸಾಗಿ, ಕೇವಲ 239 ದಿನಗಳ ಸದಾನಂದಗೌಡರ ಆಡಳಿತವನ್ನು ವರ್ಣಿಸಲು ನಮಗೆ ಸಾಧ್ಯವಿಲ್ಲ. ದಿನಕ್ಕೆ ನೂರಾರು ಬೆಳವಣಿಗೆಗಳು, ಕನ್ನಡದ ನಾಲ್ಕೈದು-ಹಿಂದಿ ಇಂಗ್ಲಿಷ್ನ ಏಳೆಂಟು ನ್ಯೂಸ್ಚಾನೆಲ್ಗಳು, ಊರುತುಂಬಾ ಅಂತರ್ಜಾಲ, ತಲೆತುಂಬಾ ಮಾಹಿತಿಯ ಮಹಾಪೂರ. ಸೋಜಿಗವೆಂದರೆ ಇಷ್ಟೆಲ್ಲಾ ಇದ್ದೂ ಸಹ ವೋಟಿಗಾಗಿ ನೊಟು ಪ್ರಕರಣದಲ್ಲಿ ಬಿ.ಜೆ.ಪಿ ಸಂಸದರನ್ನು ಜೈಲಿಗಟ್ಟಿದ್ದು ಸರಿಯೋ ತಪ್ಪೋ ಎಂದು ಎದುರಾಳಿಗಳಿಗೂ ಮನವರಿಕೆಯಾಗುವಂತೆ-ಗಂಟೆಗಟ್ಟಲೆ ಚರ್ಚೆಯ ನಂತರವೂ-ಮಾಡಲು ಘಟಾನುಘಟಿ ವಕೀಲರಾದ ಅರುಣ್ ಜೈಟ್ಲಿ, ಅಭಿಷೇಕ್ ಸಿಂಘ್ವಿ, ಆನಂದ್ ಶರ್ಮ, ಕಪಿಲ್ ಸಿಬಲ್, ರವಿಶಂಕರ್ ಪ್ರಸಾದ್ ಅಂಥವರಿಗೇ ಸಾಧ್ಯವಾಗುತ್ತಿಲ್ಲ. ಟಿ.ವಿ ಚರ್ಚೆಯ ನಂತರ ಯಾವೊಬ್ಬನೂ ಸಹ ತನ್ನ ಮೊದಲಿದ್ದ ಮನೋಭಾವವನ್ನು ಬದಲಿಸಿಕೊಂಡು ತೆರಳಿದ ಒಂದೇ ಒಂದು ಉದಾಹರಣೆ ಇಲ್ಲ. ಹಾಗಿದ್ದಾಗ, ಮೊಘಲರ ಆಡಳಿತದಲ್ಲಿ ಜನಜೀವನ, ಕೃಷ್ಣದೇವರಾಯನ ಕಾಲದ ಆಡಳಿತ ಎಂದೆಲ್ಲಾ ಇದಮಿತ್ಥಂ ಎಂದು ಹೇಗೆ ಹೇಳಲು ಸಾಧ್ಯ? ತನ್ನ ಓದಿಗೆ ನಿಲುಕಿದ, ತನ್ನ ಜ್ಞಾಪಕದಲ್ಲಿ ಉಳಿದ, ತನ್ನ ಪೂರ್ವಾಗ್ರಹ ಮನಸ್ಸಿನಿಂದ ಒಬ್ಬ ತಜ್ಞ ಬರೆದ ಲೇಖನವನ್ನೇ ಇತಿಹಾಸ ಎನ್ನಬಹುದೇ ಹೊರತು ಇತಿ + ಹಾಸ ಎನ್ನುವಂತೆ ಹೀಗೇನಡೆದದ್ದು ಎನ್ನಲಾಗದು.
ಎರಡು ದಿನ ಟಿ.ವಿ, ಪೇಪರ್ ನೋಡದೇ ನಿಮ್ಮ ಸ್ನೇಹಿತರ ಅಡ್ಡಾಗೆ ಹೋಗಿ ಅವರ ಮಾತು ಕೇಳಿಸಿಕೊಳ್ಳಿ. ಏನೋ ಹೊಸ ವಿಚಾರಗಳು, ಒಂದಕ್ಕೂ ಲಿಂಕ್ ಸಿಗುತ್ತಾ ಇಲ್ಲ, ಯಾವುದೋ ಹೊಸ ಪ್ರಪಂಚಕ್ಕೆ ಬಂದಂತಹ ಅನುಭವ. ಎರಡೇ ದಿನದಲ್ಲಿ ನೀವು ಔಟ್ಡೇಟೆಡ್ ಆಗಿರುತ್ತೀರಿ. ಕಾಲದ ವೇಗಕ್ಕೆ ಸೆಡ್ಡು ಹೊಡೆದು ವರ್ಷಗಟ್ಟಲೆ ನಿಂತಲ್ಲೇ ನಿಂತಿರುವುದು ಟಿ.ವಿ ಧಾರಾವಾಹಿಗಳೆಂಬ ಗಟ್ಟಿಗಿತ್ತಿಯರೇ ಹೊರತು, ಸುದ್ದಿಗಳೆಂಬ ಮಿಣುಕು ಹುಳಗಳಲ್ಲ.
ಈ ವೇಗದ ಚಕ್ರಕ್ಕೆ ಸಿಕ್ಕಿ ನರಳಿದ ಮತ್ತೊಬ್ಬ, ನಮ್ಮ ರೈತ. ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದ ಅವನನ್ನು ಇದ್ದಕ್ಕಿದ್ದಂತೆ ಜಾಗತೀಕರಣ ಎಂಬ ಒಲಿಂಪಿಕ್ ರೇಸ್ಗಿಳಿಸಿ, ಇಲ್ಲಿ ಎಲ್ಲರೂ ಸಮಾನರು, ಸಮಾನ ಅವಕಾಶಗಳು ಎನ್ನಲಾಯಿತು. ಫಲಿತಾಂಶ-ಓಡಲಾಗದ ರೈತ ಮುಗ್ಗರಿಸಿ ಬಿದ್ದ. ಮಣ್ಣು ಮುಕ್ಕಿದ್ದು ಇಡೀ ದೇಶ. ಮಕಾಡೆ ಮಲಗಿದ ಅವನ ಮೇಲೆ ರತ್ನಗಂಬಳಿ ಹಾಸಿ ಎಂ.ಎನ್.ಸಿ ಗಳಿಗೆ ಸ್ವಾಗತ, ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ಗಳು, ರೈತರ ಫಲವತ್ತಾದ ಭೂಮಿ ಅವರ ಕೈಗಿತ್ತು ಭರ್ಜರಿ ಒಚಿಣ ಊಟಗಳು. ಬೆಳೆದ ಫಸಲಿನ ಬೆಲೆ ಇಳಿಕೆ, ಮಾರುಕಟ್ಟೆ ಸಮಸ್ಯೆ, ದಲ್ಲಾಳಿಗಳ ದಬ್ಬಾಳಿಕೆ ನಡುವೆಯೂ ತಾನು ಕೃಷಿ ಮಾಡುತ್ತೇನೆಂದರೆ ಬಂಗಾಳದಲ್ಲಿ ಗುಂಡಿನ ಧಾಳಿ, ಕರ್ನಾಟಕದಲ್ಲಿ ಗ್ರೆಗೊರಿ ಪತ್ರಾವೋನ ಮನೆ ನೆಲಸಮ, ಕೊನೆಗೆ ತನ್ನ ಜಮೀನಿಗೇ ತಾನು ಅತಿಕ್ರಮ ಪ್ರವೇಶಿಗ ಎಂಬ ಹಣೆಪಟ್ಟಿ.
ಇನ್ನು ತಂತ್ರಜ್ಞಾನ ಕ್ಷೇತ್ರದಲ್ಲಂತೂ ಹಿಂದುಳಿದವರ ಸಂಖ್ಯೆ ದಿನೇದಿನೇ ಏರುತ್ತಲೇ ಇದೆ. ಕಂಪ್ಯೂಟರ್ ಕ್ಲಾಸ್ಗಳಿಗೆ ಹೋಗಿ ವಿಂಡೋಸ್ ಎಕ್ಸ್ಪಿ ಯನ್ನು ಕಲಿತು ಹೊರಗೆ ಬರುವಷ್ಟರಲ್ಲಿ ವಿಂಡೋಸ್ 7, 8ರ ಅವತಾರ ಆಗಿಹೋಗಿವೆ. ನನ್ನದು ಕಲರ್ ಮೊಬೈಲ್ ಗೊತ್ತಾ ! ಎಂದು ಹೆಮ್ಮೆಪಡುತ್ತಿರುವಾಗಲೇ ಐಫೋನ್ ಗಳು ಲಗ್ಗೆ ಇಟ್ಟಿವೆ. ಸಾಲ ತೀರಿಸಿಕೊಂಡ ದ್ವಿಚಕ್ರ ವಾಹನ ಪೂರ್ಣ ತನ್ನದಾಗುವ ಮೊದಲೇ ಅದು ಹಳೇ ಮಾಡೆಲ್ ಪಟ್ಟಿ ಸೇರಿಬಿಟ್ಟಿರುತ್ತದೆ.
ಎಲ್ಲಿಗೆ ಮುಟ್ಟಬಹುದು ಈ ವೇಗದ ಸ್ಪರ್ಧೆ? ಇದಕ್ಕೆಲ್ಲ ಮೂಲ ಪುರುಷರು ಯಾರು? ಅಮೆರಿಕ, ಚೀನಾ, ರಷ್ಯಾ, ರಾಜಕಾರಣಿಗಳು, ಬಹುರಾಷ್ಟ್ರೀಯ ಕಂಪೆನಿಗಳು, ಸರ್ಕಾರಿ ಅಧಿಕಾರಿಗಳು,.... ಯಾರು? ಕಾರಣ ಯಾರೇ ಇರಲಿ. ನಿಜವಾಗಲೂ ಬೇಕಿತ್ತಾ ಕಣ್ಣಿಗೆ ಏನೂ ಕಾಣದಂತೆ ಮಾಡುವ, ಗೊಂದಲದ ಧೂಳಲ್ಲಿ ನಮ್ಮನ್ನು ದಾರಿತಪ್ಪಿಸುವ ಈ ವೇಗ?
ಬುಧವಾರ, ಆಗಸ್ಟ್ 03, 2011
ಗುರುವಾರ, ಜುಲೈ 21, 2011
ಸರ್ಕಾರಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಕಲಿಯುವ ಹಕ್ಕಿಲ್ಲವೇ?
![]() |
| ಗೀತೋಪದೇಶ |
ಇತ್ತ ಸರ್ಕಾರಿ ಶಾಲೆಯ ಮಕ್ಕಳು ತಮ್ಮ ಪಠ್ಯದಲ್ಲಿ ಹಿಂದೆಲ್ಲಾ ಇದ್ದ ದೇಸೀ, ಸ್ಥಳೀಯ, ಭಾವನಾತ್ಮಕ ಪಾಠಗಳನ್ನೆಲ್ಲಾ ಕಳೆದುಕೊಂಡು ಕಾಗಕ್ಕ-ಗೂಬಕ್ಕನ ಕಥೆಗಳನ್ನು ಕಲಿಯುತ್ತಿದ್ದರೆ, ಅತ್ತ ಖಾಸಗಿ ಶಾಲೆಗಳು, International ಶಾಲೆಗಳು ತಮ್ಮ ಮಕ್ಕಳಿಗೆ ರಾಮಾಯಣ, ಮಹಾಭಾರತ, ಭಗವದ್ಗೀತೆ, ವೇದಗಣಿತ, ಸಂಸ್ಕ್ಕತಗಳನ್ನು ಸರ್ಕಾರಿ ಪಠ್ಯಕ್ರಮದ ಹೊರತಾಗಿ ಕಲಿಸುತ್ತಿವೆ. ಶಾಲೆಗಳಲ್ಲಿ ಹೇಳಿಕೊಡದಿದ್ದಲ್ಲಿ ವಿಶೇಷವಾದ ಭಗವದ್ಗೀತೆ, ವೇದಗಣಿತ ಕ್ಲಾಸ್ಗಳಿಗೆ ಹಣತೆತ್ತು ಹೋಗುತ್ತಿದ್ದಾರೆ. ತಮ್ಮ ಮಕ್ಕಳಿಗೆ ಭಗವದ್ಗೀತೆಯ ಶ್ಲೋಕಗಳು ಬರುತ್ತವೆ ಎಂದು ಹೇಳಿಕೊಳ್ಳುವುದು ಇಂದು ನಗರಗಳ ಪೋಷಕರಿಗೆ ಹೆಮ್ಮೆಯ ಮಾತಾಗಿದೆ. ಆದರೆ, ಸರಿಯಾಗಿ ಶಾಲೆಯ ಫೀಸನ್ನೇ ಕಟ್ಟಲು ಹೆಣಗುವ ಸರ್ಕಾರಿ ಶಾಲಾ ಮಕ್ಕಳಿಗೆಲ್ಲಿಂದ ಬರಬೇಕು ಭಗವದ್ಗೀತೆ ಕ್ಲಾಸ್ನ ಭಾಗ್ಯ?
![]() |
| Students of Universal Public School receiving their prizes for Bhagavadgita Competition |
ಇಂದಿನ ಶಿಕ್ಷಣದಲ್ಲಿ IQ(Intelligent Quotient) ಅನ್ನು ಮಾತ್ರ ಬೋಧಿಸಲಾಗುತ್ತಿದೆ. ಆದಷ್ಟೂ ಮಾಹಿತಿಗಳನ್ನು ಮಕ್ಕಳ ತಲೆಗೆ ತುಂಬುವುದು ಅದರ ಉದ್ದೇಶ. ಇದರ ಮಧ್ಯೆ ಕಳೆದು ಹೋಗುತ್ತಿರುವ EQ(Emotional Quotient) ಎಂಬ ಮೌಲ್ಯ, ನೈತಿಕತೆ, ಭಕ್ತಿಗಳಂತಹ ಗುಣಗಳನ್ನು ಕಲಿಸುವ ಗೋಜಿಗೆ ಇಂದಿನ ಶಿಕ್ಷಣ ಪದ್ಧತಿ ಹೋಗುತ್ತಿಲ್ಲ.
ಯಾವುದೇ ದೇಶದ ಅಭಿವೃದ್ದಿಯಾದರೂ ಕೂಡಾ ಅದು ಅಲ್ಲಿನ ಸ್ಥಳೀಯ ಸಾಮಾಜಿಕ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ ಎನ್ನುವುದೂ ಸಹ ಸಮಾಜಶಾಸ್ತ್ತ್ರದ ಇನ್ನೊಂದು ಮಾತು. ಭಾರತೀಯ ಸಮಾಜವು ಭಗವದ್ಗೀತೆ, ರಾಮಾಯಣ, ಮಹಾಭಾರತಗಳನ್ನು ತನ್ನ ಮನಸ್ಸಿನಲ್ಲಿ ಸಾವಿರಾರು ವರ್ಷಗಳಿಂದಲೂ ಉಳಿಸಿಕೊಂಡು ಬಂದಿದೆ, ಅದರಂತೆಯೇ ನಡೆಯುತ್ತಿದೆ. ಅಥವಾ ಸಮಾಜ ಇರುವಂತೆಯೇ ಈ ಗ್ರಂಥಗಳು ರಚನೆಗೊಂಡಿವೆ, ಎರಡೂ ಒಂದಕ್ಕೊಂದು ಪೂರಕ. ಭಾರತ ಅಭಿವೃದ್ದಿಯಾಗಬೇಕಾದರೆ ಅದು ಈ ಸಮಾಜದ ಅವಿಭಾಜ್ಯ ಅಂಗಗಳಾದ ಇವುಗಳನ್ನು ತಿಳಿದುಕೊಂಡವರಿಂದ ಮಾತ್ರವೇ ಹೊರತು, ಕೇವಲ ವಿದೇಶೀ ತತ್ವಜ್ಞಾನಿಗಳ ಪುಸ್ತಕಗಳಿಂದ ಪದಗಳನ್ನು ಗಟ್ಟು ಹೊಡೆದವರಿಂದ ಅಲ್ಲ.
ಭಗವದ್ಗೀತೆಯನ್ನು ಕೇವಲ ಒಂದು ಧರ್ಮದ ಗ್ರಂಥ ಎಂದು ಯಾರಾದರೂ ಹೇಳಿದರೆ, ಮಹಾತ್ಮಾ ಗಾಂಧಿಯವರನ್ನು ’ರಾಷ್ಟ್ತ್ರಪಿತ’ ಎಂದು ಕರೆಯುವ ಹಾಗೆಯೇ ಇಲ್ಲ. ಕಾರಣ, ಅವರೇ ಹೇಳಿರುವಂತೆ ತಮ್ಮ ಮನಸ್ಸಿನಲ್ಲಿ ಗೊಂದಲಗಳು ಉಂಟಾದಾಗಲೆಲ್ಲಾ ಆ ಸ್ಥಿತಿಯಿಂದ ಹೊರಬರಲು ಅವರಿಗೆ ಸಹಕರಿಸುತ್ತಿದ್ದುದು ಭಗವದ್ಗೀತೆಯ ಶ್ಲೋಕಗಳೇ ಹೊರತು, ’ಸರ್ವಸಮಾನತೆಯನ್ನು ಸಾರುವ’ ! ಬುದ್ದಿಜೀವಿಗಳು ಬರೆದ ಪಠ್ಯಪುಸ್ತಕಗಳಲ್ಲ. ಇನ್ನು, ಭಗವದ್ಗೀತೆಯನ್ನು ಅವೈಜ್ಞಾನಿಕ ಎಂದು ಯಾರಾದರೂ ಹೇಳಿದರೆ, ಖ್ಯಾತ ವಿಜ್ಞಾನಿ ಐನ್ಸ್ಟೀನ್ ಅವರನ್ನು ವಿಜ್ಞಾನಿಯಲ್ಲ ಎಂದು ಹೇಳಬೇಕಾಗುತ್ತದೆ. ಏಕೆಂದರೆ, ಐನ್ಸ್ಟೀನ್ಗೆ ಭಗವದ್ಗೀತೆಯ ಮುಂದೆ ಪ್ರಪಂಚದ ಉಳಿದೆಲ್ಲಾ ಜ್ಞಾನವೂ ಅನುಪಯೋಗಿಯಂತೆ ಕಾಣುತ್ತಿತ್ತು.
ಕೇವಲ, ಬಿಜೆಪಿ ಸರ್ಕಾರ ಭಗವದ್ಗೀತೆಗೆ ಬೆಂಬಲವಾಗಿ ನಿಂತಿದೆ ಎಂದೋ, ಒಬ್ಬರು ಸ್ವಾಮೀಜಿಯವರ ನೇತೃತ್ವದಲ್ಲಿ ಇದರ ಅಭಿಯಾನ ನಡೆಯುತ್ತಿದೆ ಎಂದೋ, ಕಾಗೇರಿಯವರ ಹೇಳಿಕೆಗೆ ಪ್ರತಿಕ್ರಿಯೆಯಾಗಿಯೋ ಅರಚಾಡುವ ಬದಲು, ಭಾರತದ ಮಾನಸಿಕತೆಯನ್ನೊಮ್ಮೆ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ. ಭಗವದ್ಗೀತೆಯಲ್ಲಿ ಇಲ್ಲಿನ ಮಣ್ಣಿನ ವಾಸನೆ ಇದೆ, ಎಲ್ಲಕ್ಕಿಂತ ಹೆಚ್ಚಾಗಿ ಸಾವಿರಾರು ವರ್ಷಗಳಿಂದ ಅದು ಜನಮಾನಸದಲ್ಲಿ ಉಳಿದುಕೊಂಡು ಬಂದಿದೆ. ಬಿಜೆಪಿ ಸರ್ಕಾರ, ಕಾಗೇರಿ, ಸ್ವಾಮೀಜಿಗಳು ಇರಲಿ-ಬಿಡಲಿ, ಬುದ್ದಿಜೀವಿಗಳು ಎಷ್ಟೇ ಅರಚಾಡಲಿ, ಅದು ಇದ್ದೇ ಇರುತ್ತದೆ, ಇದು ಸತ್ಯ. ಆದರೆ, ಈ ಸತ್ಯ ಕೇವಲ ಹಣವಂತರ ಮಕ್ಕಳಿಗೆ, ಖಾಸಗಿ ಶಾಲಾ ಮಕ್ಕಳಿಗೆ ಸಿಕ್ಕರೆ ಸಾಕೇ ಅಥವಾ ನಮ್ಮ ಸರ್ಕಾರೀ ಶಾಲೆಗೆ ಬರುವ ಬಡ ಮಕ್ಕಳಿಗೂ ಬೇಕೇ-ಬೇಡವೇ ಎಂಬುದು ಮಾತ್ರ ನಮ್ಮ ಮುಂದಿರುವ ಪ್ರಶ್ನೆ.
ಶುಕ್ರವಾರ, ಜೂನ್ 17, 2011
ಶನಿವಾರ, ಜೂನ್ 11, 2011
ಪ್ರತಾಪ್ ಸಿಂಹ ಪ್ರಯೋಗಗಳು ಹಾಗೂ ನನ್ನ ಮನಸ್ಸಿನ ಪ್ರಶ್ನೆಗಳು
ಪ್ರತಾಪ್ ಸಿಂಹ ನಮ್ಮ ಕಾಲದ ಸೋಕ್ಷ್ಮ ಹಾಗೂ ತೀಕ್ಷ್ಣ ಪತ್ರಕರ್ತ. ಎಷ್ಟೋ ಯುವಕರಿಗೆ ಪತ್ರಿಕೆ ಓದಲು ಇರುವ ಕಾರಣವೇ ಪ್ರತಾಪ್ ಸಿಂಹ ಲೇಖನ ಎಂದರೆ ಅಚ್ಚರಿಯಿಲ್ಲ. ಕಾರಣ, ಭಾನುವಾರದಿಂದ ಶುಕ್ರವಾರದವರೆಗೆ ನೋಡಿದ-ಓದಿದ ಸುದ್ದಿಗಳು ಪರಿಹಾರ ಕಾಣದೇ ಓದುಗರ ಮನಸ್ಸಿನಲ್ಲಿ ಸುತ್ತುತ್ತಿರುವಾಗ, ಅದಕ್ಕೆ ಸರಿಯಾಗಿ ಪ್ರತಾಪ್ ಸಿಂಹ ಅಂತಹದೇ ಒಂದು ವಿಷಯವನ್ನು ತೆಗೆದುಕೊಂಡು ಲೇಖನ ಬರೆಯುತ್ತಾರೆ. ಓದುಗನ ಮನದಲ್ಲಿ ಸುತ್ತುತ್ತಿದ್ದ ಸಂಶಯದ ಪ್ರಶ್ನೆಗಳಿಗೆಲ್ಲಾ ಒಂದು ಸಮಾಧಾನ ಕೊಡುತ್ತದೆ ಅವರ ಲೇಖನ. 2000ನೇ ಇಸವಿಯಲ್ಲಿ ಬರೆಯುತ್ತಿದ್ದ ಅವರ ಲೇಖನಗಳಷ್ಟೇ 2011ರ ಲೇಖನಗಳೂ ತೀಕ್ಷಣವಾಗಿವೆ, ಅದರಲ್ಲಿ ಎರಡು ಮಾತಿಲ್ಲ.
ಆದರೆ, ಇತ್ತೀಚೆಗೆ ಪ್ರತಾಪ್ ಫೇಸ್ಬುಕ್ನಲ್ಲಿ ಬೆಳೆಸಿಕೊಂಡಿರುವ ಪರಿಪಾಠದ ಬಗ್ಗೆ ನನ್ನ ಪ್ರಶ್ನೆ. ಮೊದಲನೆಯದಾಗಿ, ಇದೇ ವರ್ಷ ಮೇ ೨೮ರಂದು ಸ್ವಾತಂತ್ರ್ಯವೀರ ಸಾವರ್ಕರ್ ಮತ್ತು ಬಾರ್ಸಿಲೋನಾ ಹಾಗೂ ಮ್ಯಾಂಚೆಸ್ಟರ್ ಯುನೈಟೆಡ್ ನಡುವಿನ UEFA ಚಾಂಪಿಯನ್ ಲೀಗ್ ಫೈನಲ್ ಪಂದ್ಯ ಒಂದೇ ದಿನ ಬಂದಿದ್ದವು. "ಇವೆರಡೂ ವಿಷಯಗಳು ಬಹಳ ಒಳ್ಳೆಯವು, ಯಾವುದನ್ನೂ ಬಿಡಲು ಮನಸ್ಸಾಗುತ್ತಿಲ್ಲ. ಯಾವುದರ ಬಗ್ಗೆ ಲೇಖನ ಬರೆಯಲಿ?" ಎಂದು ಪ್ರತಾಪ್ ಫೇಸ್ಬುಕ್ ಸ್ನೇಹಿತರಲ್ಲಿ ಕೇಳಿದರು. ಅದಕ್ಕೆ ಬಂದ ಅಭೂತಪೂರ್ವ ಪ್ರತಿಕ್ರಿಯೆಗಳಿಗೆ ಸೋತೋ ಎನೋ ತಮ್ಮ ಸಂಪಾದಕ ವಿಶ್ವೇಶ್ವರ ಭಟ್ಟರ ಅನುಮತಿ ಪಡೆದು, ಎರಡೂ ಲೇಖನಗಳನ್ನು ಮುಖಾಮುಖಿಯಾಗಿ ಒಂದೇ ದಿನ ಪ್ರಕಟಿಸಿದರು.
ಇನ್ನೊಂದು ಪ್ರಸಂಗ, ಇದೀಗ ನಡೆಯುತ್ತಿರುವ ಕಪ್ಪು ಹಣದ ವಿರುದ್ಧ ಬಾಬಾ ರಾಮದೇವ್ ಅವರ ಪ್ರತಿಭಟನೆ ಹಾಗೂ ಮೊನ್ನೆ(ಜೂನ್9) ಮೃತರಾದ ಪ್ರಸಿದ್ಧ ಚಿತ್ರಕಾರ ಎಂ.ಎಫ್.ಹುಸೇನರ ವಿಚಾರಗಳ ಕುರಿತು. ಈಗಲೂ ಪ್ರತಾಪ್ ಅದೇ ದಾರಿ ಅನುಸರಿಸಿದರು. ಓದುಗರು ಈ ಹಿಂದಿನಂತೆಯೇ ಅನೇಕ ಅಭಿಪ್ರಾಯ ಕೊಟ್ಟರು. ಆದರೆ, ಹಿಂದಿನ ದಿನವೇ ಹೇಳಿದಂತೆ ಪ್ರತಾಪ್, ಎಂ.ಎಫ್. ಹುಸೇನ್ ಬಗ್ಗೆ ಮಾತ್ರ ಲೇಖನ ಬರೆದರು.
ಈಗ ನನಗನ್ನಿಸುವುದು,
1) ಸುಮಾರು 11-12 ವರ್ಷಗಳಿಂದ ಯಾವುದೇ ಪತ್ರಿಕೆಯಲ್ಲಿ ಒಂದೇ ದಿನ ಒಬ್ಬನೇ ಲೇಖಕನ ಎರಡು ಲೇಖನಗಳು ಎದುರು ಬದರಾಗಿ ಪ್ರಕಟವಾಗಿದ್ದು ನಾನು ನೋಡಿಲ್ಲ.(ನಾನು ನೋಡಿಲ್ಲ ಎಂದಾಕ್ಷಣ ಆಗಿಲ್ಲ ಎಂದೇನೂ ಅಲ್ಲ. ಹಾಗೇನಾದರೂ ಇದ್ದರೆ ತಿಳಿಸಿ.) ಈ ರೀತಿ ಸಂಪ್ರದಾಯವನ್ನು ಮುರಿಯುವುದು ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ನೀಡುತ್ತದೆಯೇ ಅಥವಾ ಋಣಾತ್ಮಕವಾಗಿ ಪರಿಣಾಮ ಬೀರಬಹುದೇ?
2) ಒಬ್ಬ ಲೇಖಕ ತಾನು ಏನು ಬರೆಯಬೇಕೆಂದು ಓದುಗರಲ್ಲಿ ಅಭಿಪ್ರಾಯ ಕೇಳುವುದು ಎಷ್ಟು ಸರಿ?
3) ಜನರ ಮನಕ್ಕೆ ಅನುಗುಣವಾಗಿ ಬರೆಯಬೇಕು ಎನ್ನುವುದು ಸರಿಯಾದರೂ, ಓದುಗರು ಬಯಸಿದ್ದನ್ನೇ ಕೊಡುವುದು ವ್ಯಾಪಾರವಾಗುವುದಿಲ್ಲವೇ? ಇದರಿಂದ ಲೇಖಕ ಏನು ಬರೆಯಬೇಕೆಂದು ಓದುಗರೇ Demand ಮಾಡುವ-ಯಾವ ಲೇಕನ ಇರಬೇಕೆಂದು ಅವರೇ ನಿರ್ಧರಿಸುವಂತಾದರೆ, ಲೇಖಕನ ಬೌದ್ಡಿಕ ಸ್ವಾತಂತ್ರ್ಯಕ್ಕೇನು ಬೆಲೆ?
4) ಇನ್ನೊಂದು ಮಗ್ಗುಲಿಂದ ಯೋಚಿಸಿದರೆ, ಒಂದು ಪತ್ರಿಕೆಯಲ್ಲಿ ಪ್ರಕಟವಾಗುವ ಲೇಖನದ ಬಗ್ಗೆ ಇಷ್ಟೊಂದು ಯುವಕರು ಚರ್ಚಿಸುತ್ತಿರುವುದು ಪತ್ರಿಕೋದ್ಯಮದ, ಅದರಲ್ಲೂ ಕನ್ನಡ ಪತ್ರಿಕೋದ್ಯಮದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲವೇ?
5) ಹೀಗೇ ಬರೆಯಬೇಕು, ಹೀಗೇ ಓದಬೇಕು ಎಂಬಂತಹ ಸೂತ್ರಗಳ ಬಲೆಯಲ್ಲಿ ಬಿದ್ದು ಹೊರಳಾಡುವ, ನಿಂತ ನೀರಂತಾಗಿರುವ ಪತ್ರಿಕೋದ್ಯಮದಲ್ಲಿ ಇದು ಹೊಸ ಗಾಳಿ ಬೀಸುವ ಲಕ್ಷಣಗಳೇ ಅಥವಾ ಹೊಸದೊಂದನ್ನು ಮಾಡುವ ಭರದಲ್ಲಿ ಏನೇನೋ ಮಾಡಿದಂತಾಗುತ್ತದೆಯೇ?
ನನಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಶುಕ್ರವಾರ, ಜೂನ್ 03, 2011
ಸಿಯಾಚಿನ್ ಮಹತ್ವ-- ಸೇನೆಗಷ್ಟೇ ಅಲ್ಲ, ರಾಜಕಾರಣಿಗಳಿಗೂ ತಿಳಿಯಲಿ
ಆ ಜಾಗದಲ್ಲಿ ಭಾರತದ ನೂರಾರು ಸೈನಿಕರು ಪಹರೆ ಕಾಯುತ್ತಿದ್ದಾರೆ. ಪಾಕಿಸ್ತಾನದ ಚೆಕ್ಪೋಸ್ಟ್ನಿಂದ ಕೇವಲ 400 ಮೀಟರ್ ದೂರದಲ್ಲಿ ಭಾರತದ ಸೈನ್ಯ ಇದೆ. ಭಾರತ ತಾನೇ ಅಭಿವೃದ್ದಿ ಪಡಿಸಿದ ಚೀತಾ ಹೆಲಿಕಾಪ್ಟರ್ಗಳು ಮಾತ್ರ ಅಲ್ಲಿಗೆ ಹೋಗಬಲ್ಲವು. 2 ರಿಂದ 30 ಸೆಕೆಂಡ್ನೊಳಗೆ ತನ್ನ ಕೆಲಸ ಮುಗಿಸಿ ಅಲ್ಲಿನ ಹೆಲಿಪ್ಯಾಡ್ನಿಂದ ಹಾರದಿದ್ದರೆ, ಶತ್ರುಗಳ ಗುಂಡಿಗೆ ಬಲಿಯಾಗಬೇಕಾಗುತ್ತದೆ. ಇಂತಹ ದುರ್ಗಮ ಸ್ಥಳವೇ ಸಿಯಾಚಿನ್ ಗ್ಲೇಸಿಯರ್.
ಕುಮಾವೂನ್ ರೆಜಿಮೆಂಟ್ನ ಮೇಜರ್ ಆರ್.ಎಸ್ ಸಂಧು ಅವರ ನೇತೃತ್ವದ ಬೆಟಾಲಿಯನ್ 1984ರಲ್ಲಿ ಕಾರ್ಗಿಲ್ನಿಂದ ಈಶಾನ್ಯಕ್ಕಿರುವ-ಎಪ್ಪತ್ತು ಕಿಲೋಮೀಟರ್ ಉದ್ದದ, ಸಮುದ್ರ ಮಟ್ಟದಿಂದ ಇಪ್ಪತ್ತು ಸಾವಿರ ಅಡಿ ಎತ್ತರವಿರುವ ಈ ಪ್ರದೇಶವನ್ನು ಪಾಕಿಸ್ತಾನದ ಕಪಿಮುಷ್ಟಿಯಿಂದ ಬಿಡಿಸಿಕೊಂಡಿತು. ಸಾಮಾನ್ಯವಾಗಿ ಮೈನಸ್ 50 ಡಿಗ್ರಿ ತಾಪಮಾನವಿರುವ ಸಿಯಾಚಿನ್ ಇಂದು ಭಾರತ-ಪಾಕಿಸ್ತಾನ ನಡುವಿನ ಮಾತುಕತೆಗಳ ಕೇಂದ್ರಬಿಂದುವಾಗಿದೆ. ಇದೇ ಪ್ರಕ್ರಿಯೆಯ ಮುಂದಿನ ಭಾಗವಾಗಿ ಕಳೆದ ತಿಂಗಳು 31ನೇ ತಾರೀಖು ಮಂಗಳವಾರ(ಮೇ 2011) ನವದೆಹಲಿಯಲ್ಲಿ ನಡೆದ 12ನೇ ಸುತ್ತಿನ ಮಾತುಕತೆಯೂ ಯಾವುದೇ ಫಲಿತಾಂಶವಿಲ್ಲದೇ ಮುಗಿದಿದೆ.
![]() |
| ಭಾರತ ನಿರ್ಮಿತ ಚೀತಾ ಹೆಲಿಕಾಪ್ಟರ್ |
1947ರಲ್ಲಿ ಜನಿಸಿದಾಗಿನಿಂದಲೂ ಕಾಶ್ಮೀರವನ್ನು ಪಡೆಯುವುದೇ ತನ್ನ ಏಕೈಕ ಗುರಿ ಎಂದು ಹೋರಾಡುತ್ತಿರುವ ಪಾಕಿಸ್ತಾನ, ಭಾರತದ ಮೇಲೆ ಬೇರೆ-ಬೇರೆ ರೀತಿಯಿಂದ ಒತ್ತಡ ಹೇರುತ್ತಲೇ ಬಂದಿದೆ. 48, 65, ಹಾಗೂ 99ರಲ್ಲಿ ಭಾರತದೊಂದಿಗೆ ನೇರ ಯುದ್ಧವನ್ನೇ ಮಾಡಿ ಅದು ಸೋತಿದೆ ಎಂಬುದು ಗೊತ್ತಿರುವ ಸಂಗತಿ. ಆದರೆ, ಅದೇ ಪಾಕಿಸ್ತಾನ 90, 95, 96 ಹಾಗೂ 99ರಲ್ಲಿ ನಾಲ್ಕು ಬಾರಿ ಸಿಯಾಚಿನ್ ಮೇಲೆ ದಾಳಿ ಮಾಡಿರುವುದು ಹಲವರಿಗೆ ಗೊತ್ತಿಲ್ಲ. 1999ರಲ್ಲಂತೂ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಹಾಗೂ ನವಾಜ್ ಷರೀಫ್, ಐತಿಹಾಸಿಕ ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ ಕೇವಲ 17 ದಿನಗಳಲ್ಲಿ ಸಿಯಾಚಿನ್ ಮೇಲೆ ಪಾಕ್ ದಾಳಿ ಮಾಡಿತು.
ಸಿಯಾಚಿನ್ ಎಂದರೆ ಕಾಡು ಗುಲಾಬಿಗಳು ಇರುವ ಸ್ಥಳ ಎಂದರ್ಥ. ಅದು ಯಾರು ಈ ಹೆಸರಿಟ್ಟರೋ, ಇಲ್ಲಿ ಗುಲಾಬಿಯ ಮಾತಿರಲಿ, ಗುಲಾಬಿ ಬಣ್ಣವೂ ಕಾಣುವುದಿಲ್ಲ. ಎತ್ತ ನೋಡಿದರೂ ಕಣ್ಣಿಗೆ ರಾಚುವ ಬಿಳಿ ಬಣ್ಣ. ಆದರೆ, ಕೆಲಕಾಲ ಇಲ್ಲಿ ಕಂಡದ್ದು ಎರಡೂ ದೇಶಗಳ ಸೈನಿಕರ ರಕ್ತದ ಕೆಂಪು ಬಣ್ಣ ಮಾತ್ರ. 95ರ ದಾಳಿಯಲ್ಲಿ ಪಾಕ್ನ 40 ಸೈನಿಕರು ಸಾವನ್ನಪ್ಪಿದರೆ, 96ರ ದಾಳಿಯಲ್ಲಿ ಭಾರತದ ಎಂ.ಐ-17 ಹೆಲಿಕಾಪ್ಟರ್ ನೆಲಕ್ಕುರುಳಿತು. ಸಿಯಾಚಿನ್ನ ಮತ್ತೊಂದು ವಿಶೇಷತೆ, ಅಲ್ಲಿ ಮದ್ದು ಗುಂಡಿಗಿಂತ ಹೆಚ್ಚಾಗಿ ಸೈನಿಕರು ಸಾಯುವುದು ವಾತಾವರಣದ ವೈಪರೀತ್ಯದಿಂದಾಗಿ ಎನ್ನುವುದು. 80ರ ದಶಕದಲ್ಲಿ ವರ್ಷಕ್ಕೆ ಸುಮಾರು 400 ಸೈನಿಕರು ಹಿಮಗಡಿತ(Frostbite) ಹಾಗೂ ಹಿಮಪಾತಗಳಿಂದ ಅಲ್ಲಿ ಸಾವನ್ನಪ್ಪುತ್ತಿದ್ದರು. ಆದರೆ, ಆ ನಂತರ ಅದು ವರ್ಷಕ್ಕೆ 20-22 ಕ್ಕೆ ಇಳಿದು ಇದೀಗ ಸೈನ್ಯದ ’ಅಚ್ಚುಕಟ್ಟಿನ’ ವ್ಯವಸ್ಥೆಯ ಪರಿಣಾಮ, ಆರೋಗ್ಯದ ಕಾರಣಕ್ಕೆ ಯಾರೂ ಸಾಯುತ್ತಿಲ್ಲ. ಆದರೆ, ಈ ಅಚ್ಚುಕಟ್ಟಿನ ವ್ಯವಸ್ಥೆಗೆ ತಗಲುವ ವೆಚ್ಚ ಬಲು ದುಬಾರಿ. ಭಾರತದ ಸೈನಿಕರಿಗೆ ಎಲ್ಲವನ್ನೂ ಹೆಲಿಕಾಪ್ಟರ್ನಲ್ಲಿ ಸಾಗಿಸಬೇಕಾಗುತ್ತದೆ. ಅಲ್ಲಿಗೆ ತಲುಪುವ ಹೊತ್ತಿಗೆ ಒಂದು ಚಪಾತಿಯ ವೆಚ್ಚ ಬರೋಬ್ಬರಿ 500ರೂಪಾಯಿ ಆಗಿರುತ್ತದೆ. ಭಾರತ ಸರ್ಕಾರಕ್ಕೆ ಸಿಯಾಚಿನ್ ನಿರ್ವಹಣೆಗೆ ದಿನವೊಂದಕ್ಕೆ ತಗಲುವ ವೆಚ್ಚ 10 ಲಕ್ಷದಿಂದ 2ಕೋಟಿಯವರೆಗೆ!!. ಇಷ್ಟೆಲ್ಲಾ ಕಷ್ಟಪಟ್ಟು ಆ ಭೂಮಿಗಾಗಿ ಏಕೆ ಹೋರಾಡಬೇಕು? ಸುಮ್ಮನೆ ಸೈನ್ಯ ಹಿಂತೆಗೆದುಕೊಳ್ಳಬಾರದೇ ಎಂದು ಹಲವರು ಭಾರತಕ್ಕೆ ಉಪದೇಶ ನೀಡುತ್ತಾರೆ. ಆದರೆ, ಭಾರತೀಯ ಸೈನ್ಯ ಮಾತ್ರ ಅದಕ್ಕೆ ಒಪ್ಪುತ್ತಿಲ್ಲ. ಕಾರಣ, ಸಿಯಾಚಿನ್ಗಿರುವ Geographical ಹಾಗೂ Stratigical ಮಹತ್ವ.
![]() |
| ಐತಿಹಾಸಿಕ ಲಾಹೋರ್ ಒಪ್ಪಂದ |
ಸಿಯಾಚಿನ್ ಇರುವುದು ಅಧಿಕೃತವಾಗಿ ಭಾರತ-ಪಾಕ್ ಗಡಿಗಳಲ್ಲಾದರೂ, ಇತ್ತೀಚೆಗೆ ನಡೆದ ಬೆಳವಣಿಗೆಯಲ್ಲಿ, ಯುದ್ಧದಲ್ಲಿ ಭಾರತದಿಂದ ವಶಪಡಿಸಿಕೊಂಡ POK ಯಲ್ಲಿರುವ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶವನ್ನು ಪಾಕಿಸ್ತಾನವು ಚೀನಾಕ್ಕೆ ಬಿಟ್ಟುಕೊಟ್ಟಿದೆ. ಆ ಪ್ರದೇಶದ ಮೂಲಕ ಅರಬ್ ದೇಶಗಳಿಗೆ ರಸ್ತೆ ನಿರ್ಮಿಸಿಕೊಂಡು ತನ್ನ ತೈಲ ಸಾಗಣಿಕೆಯನ್ನು ಸುಲಭಗೊಳಿಸಿಕೊಳ್ಳುವುದು ಚೀನಾದ ಹೊರ ಉದ್ದೇಶವಾದರೆ, ಗ್ಯಾಸ್ ಪೈಪ್ಲೈನ್ ಹೆಸರಿನಲ್ಲಿ ಸುರಂಗಗಳನ್ನು ಅಗೆದು ಮಿಸೈಲ್ ಅಡಗಿಸಿಟ್ಟು ಭಾರತವನ್ನು ಬೆದರಿಸುವುದು ಅದರ ಒಳ ಮರ್ಮ. ಪಾಕ್ ಚೀನಾಕ್ಕೆ ಬಿಟ್ಟುಕೊಟ್ಟಿರುವ ಪ್ರದೇಶ ಇರುವುದು ಸಿಯಾಚಿನ್ಗೆ ಹೊಂದಿಕೊಂಡಂತೆಯೇ. ಅಂದರೆ, ಸಿಯಾಚಿನ್ ಮೇಲೆ ನಿಂತರೆ, ಪಾಕಿಸ್ತಾನ-ಚೀನಾ ಎರಡೂ ದೇಶಗಳ ಚಟುವಟಿಕೆಗಳನ್ನು ನಿಯಂತ್ರಿಸಬಹುದು, ಅಕ್ರಮ ಒಳನುಸುಳುವಿಕೆಯನ್ನು ತಡೆಯಬಹುದು. ಸಿಯಾಚಿನ್ಗಿರುವ ನಿಜವಾದ ಮಹತ್ವ ಅದು.
1984ರಿಂದಲೂ ಸಿಯಾಚಿನ್ ತನಗೆ ಸೇರಬೇಕೆಂದು ವಾದಿಸುತ್ತಿದ್ದ ಪಾಕಿಸ್ತಾನ ಈಗ ರಾಗ ಬದಲಾಯಿಸಿದೆ. ಸಿಯಾಚಿನ್ನ ನಿರ್ವಹಣೆಗಾಗಿ ಎರಡೂ ದೇಶಗಳಿಗೆ ತಗಲುವ ವೆಚ್ಚ, ಸೈನಿಕರ ಮರಣವನ್ನು ಗಮನದಲ್ಲಿಟ್ಟುಕೊಂಡು ಅಲ್ಲಿಂದ ಎರಡೂ ಸೈನ್ಯಗಳನ್ನು ಹಿಂತೆಗೆದುಕೊಳ್ಳೋಣ ಎಂಬ ವಾದವನ್ನು ಮಂಡಿಸುತ್ತಿದೆ. ಕೇವಲ ಭಾರತದ ರಾಜಕಾರಣಿಗಳೇ ಎಲ್ಲ ನಿರ್ಧಾರಗಳನ್ನೂ ತೆಗೆದುಕೊಳ್ಳುವುದು ಸಾಧ್ಯವಾಗಿದ್ದರೆ, ಈ ಹಿಂದಿನ ಯುದ್ಧಗಳಲ್ಲಿ ಗೆದ್ದ ಭೂಮಿಯನ್ನು ವಾಪಸ್ ಪಾಕ್ಗೆ ಬಿಟ್ಟುಕೊಟ್ಟಂತೆ ಇದನ್ನೂ ನಮ್ಮ ನಾಯಕರು ಕೊಟ್ಟಿರುತ್ತಿದ್ದರೇನೋ!!. ಆದರೆ, ಭಾರತ ಸೇನೆಯ ಪ್ರಬಲ ವಿರೋಧದ ಪರಿಣಾಮ ಅದು ಇನ್ನೂ ನಮ್ಮ ಕೈಲಿದೆ. ಅಲ್ಲಿಂದ ಕಾಲ್ತೆಗೆದಂತೆ ನಟಿಸಿ, ಭಾರತದ ಸೇನೆ ವಾಪಸಾದ ನಂತರ ಸಿಯಾಚಿನ್ಅನ್ನು ಆಕ್ರಮಿಸಿಕೊಳ್ಳುವ ಪಾಕಿಸ್ತಾನದ ಬುದ್ದಿ ನಮ್ಮ ನಾಯಕರಿಗಿಂತ ಸೇನೆಯ ಅಧಿಕಾರಿಗಳಿಗೆ ಚೆನ್ನಾಗಿ ಗೊತ್ತು. ಯುದ್ಧ ನಡೆಸುತ್ತಿರುವುದು ನಾವಲ್ಲ, ಮುಜಾಹೀದೀನ್ಗಳು ಎಂದು ಕಾರ್ಗಿಲ್ ಯುದ್ಧದ ಪ್ರಾರಂಭದಲ್ಲಿ ಪಾಕ್ ಸೇನೆ ನೀಡಿದ್ದ ಮೋಸದ ಮಾತನ್ನು ನಮ್ಮ ಸೇನೆ ಇನ್ನೂ ಮರೆತಿಲ್ಲ.
ಸುಮಾರು ಕೊನೆ ಹಂತಕ್ಕೆ ಬಂದ್ದಿದ್ದ ಸಿಯಾಚಿನ್ ಮಾತುಕತೆಯನ್ನು 2008ರಲ್ಲಾದ ಮುಂಬೈ ದಾಳಿಯ ನಂತರ ಭಾರತ ಸ್ತಗಿತಗೊಳಿಸಿತು. ಇದೀಗ ಅಮೆರಿಕದ ಕಡೆಯಿಂದ ಒತ್ತಡ ಹೇರುತ್ತಿರುವ ಪಾಕ್, ಮಾತುಕತೆಯನ್ನು ಮತ್ತೆ ಆರಂಭಿಸಿದೆ. ಮೊನ್ನೆ ದಿಲ್ಲಿಯಲ್ಲಿ ಭಾರತದ ರಕ್ಷಣಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಹಾಗೂ ಪಾಕಿಸ್ತಾನದ ಸೈಯದ್ ಅಥರ್ ಅಲಿ ನಡುವೆ ನಡೆದ ಮಾತುಕತೆಯೂ ಎಂದಿನಂತೆ ಮುರಿದು ಬಿದ್ದಿದೆ. ಕಾರಣ, 84ರಿಂದ ಅನುಸರಿಸಿಕೊಂಡು ಬರುತ್ತಿರುವ Actual Ground Position Line(AGPL) ಅನ್ನು ಅಧಿಕೃತ ಎಂದು ಪಾಕ್ ಒಪ್ಪಿಕೊಂಡರೆ ಮಾತ್ರ ಸೈನ್ಯದ ಹಿಂತೆಗೆತ ಎಂಬ ಭಾರತದ ಕಠಿಣ ನಿಲುವು. ಆದರೆ, ಎಂದಿನಂತೆ ಪಾಕ್ ಈ ನಿಬಂಧನೆಗೆ ಒಪ್ಪಿಲ್ಲ. ಇಲ್ಲೇ ತಿಳಿಯುತ್ತದೆ ಪಾಕ್ನ ಕುತಂತ್ರ! AGPL ಅನ್ನು ಅಧಿಕೃತ ಎಂದು ಒಪ್ಪಿಕೊಂಡರೆ ಸಿಯಾಚಿನ್ ಶಾಶ್ವತವಾಗಿ ಭಾರತಕ್ಕೆ ಸೇರುತ್ತದೆ, ತಾನು ಅದಕ್ಕಾಗಿ ಪಟ್ಟ ’ಶ್ರಮ’ವೆಲ್ಲಾ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ ಎಂಬುದು ಅದಕ್ಕೆ ಗೊತ್ತು.
![]() |
| Click on Image to Enlarge |
ಪಾಕ್ನ ಇನ್ನೊಂದು ವಾದವೆಂದರೆ, ಸಿಯಾಚಿನ್ ಸಹ ಕಾಶ್ಮೀರಕ್ಕೇ ಸೇರಿರುವುದರಿಂದ ಅದನ್ನು ವಿವಾದಗ್ರಸ್ತ ಭೂಮಿ ಎಂದು ಪರಿಗಣಿಸಿ ಕಾಶ್ಮೀರ ಮಾತುಕತೆಯಲ್ಲೇ ಅದನ್ನೂ ಸೇರಿಸಬೇಕು ಎಂಬುದು. ಇದಕ್ಕೆ ಆಸ್ಪದ ಕೊಡದ ಭಾರತ, ಸಿಯಾಚಿನ್ ಅನ್ನು ಕಾಶ್ಮೀರ ಮಾತುಕತೆಯಿಂದ ದೂರವೇ ಇಟ್ಟಿದೆ. ಒಮ್ಮೆ ಪಾಕ್ ಕೈಗೆ ಸಿಯಾಚಿನ್ ಸಿಕ್ಕಿತೆಂದರೆ, ಅದನ್ನು ಪಡೆಯುವುದು ಚೀನಾಕ್ಕೆ ಬಹಳ ಸುಲಭದ ಕೆಲಸ. ಆ ಮೂಲಕ ಭಾರತವನ್ನು ಹೆದರಿಸಬಹುದು ಎಂಬುದು ರಕ್ಷಣಾ ವಿಮರ್ಷಕರ ಅಭಿಪ್ರಾಯ.
ಪಾಕಿಸ್ತಾನದ ಮೇಲಿರುವ ಅಪನಂಬಿಕೆಯಿಂದ ಭಾರತವು ಸಿಯಾಚಿನ್ನಿಂದ ಸೇನೆಯನ್ನು ಹಿಂತೆಗೆದುಕೊಳ್ಳುತ್ತಿಲ್ಲ ಎಂಬುದು ಹೊರಗಿನ ಚಿತ್ರವಾದರೂ, ಸೇನೆ ಹಿಂತೆಗೆದುಕೊಂಡರೆ ಶಾಂತಿಯ ಹೆಸರಿನಲ್ಲಿ ಅಮೆರಿಕದ ಒತ್ತಡಕ್ಕೆ ಮಣಿದು ನಮ್ಮ ನಾಯಕರು ಅದನ್ನು ಪಾಕಿಸ್ತಾನಕ್ಕೆ ಒಪ್ಪಿಸುತ್ತಾರೆ ಎಂಬ, ನಮ್ಮ ನಾಯಕರ ಮೇಲೆ ಸೇನೆಗಿರುವ ಬಲವಾದ (ಅಪ)ನಂಬಿಕೆಯೇ ಕಾರಣ ಎಂಬುದು ಸತ್ಯ. ಒಟ್ಟಿನಲ್ಲಿ ಇತಿಹಾಸದಿಂದ ನಾವು ಈಗಲಾದರೂ ಪಾಠ ಕಲಿಯಲೇ ಬೇಕು. ಪಾಕ್ನೊಂದಿಗೆ ವ್ಯವಹರಿಸುವಾಗ ಹಿಂದೆ ಆದ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಬೇಕಾದುದು, ಸೇನೆಯ ಮೇಲೆ ಅನಗತ್ಯ ಒತ್ತಡ ಹೇರದಿರುವುದು ನಮ್ಮ ನಾಯಕರ ಕರ್ತವ್ಯ.
ಕೊನೆ ಹನಿ: ಇಡೀ ದೇಶದಲ್ಲಿ ನಮ್ಮ ನಾಯಕರ ನಿಜವಾದ ಬಂಡವಾಳ ಗೊತ್ತಿರುವುದು ಭಾರತೀಯ ಸೈನ್ಯಕ್ಕೆ ಮಾತ್ರ !. ನಮ್ಮ ಸೈನ್ಯದ ಮೇಲೆ ಅಭಿಮಾನ ಪಡಲು ಇನ್ನೊಂದು ಕಾರಣ ಸಿಕ್ಕಂತಾಯಿತು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)










